ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ ರೌದ್ರ ನರ್ತನಕ್ಕೆ ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಈ ವೀಡಿಯೋ ಭಾರೀ ಸದ್ದು ಮಾಡುತ್ತಿದೆ.
ಈ ಬಗ್ಗೆ ʼಕೂರ್ಗ್ ದಿ ಕಾಶ್ಮೀರ್ ಆಫ್ ಕರ್ನಾಟಕʼ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೆಯಾಗಿದ್ದು, ನೀರು ಉಕ್ಕುತ್ತಿರುವ ದೃಶ್ಯ ಎಲ್ಲರ ಹುಬ್ಬೇರಿಸುವಂತಿದೆ.
ಆವರ್ತಿಯಿಂದ ಮುಳಸೋಗೆ ಮಾರ್ಗದ ರಸ್ತೆ ಬದಿಯಲ್ಲಿ ನೀರು ಉಕ್ಕುತ್ತಿರುವ ದೃಶ್ಯ ಕಂಡುಬಂದಿದೆ. ಒಂದು ಮರದ ಎತ್ತರಕ್ಕೆ ನೀರು ಚಿಮ್ಮುತ್ತಿರುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ. ಉಕ್ಕಿ ಹರಿಯುತ್ತಿರುವ ನೀರು ನದಿಗೆ ಸೇರುತ್ತಿದ್ದು, ಈ ಭಾಗದಲ್ಲಿ ಕೆಲಕಾಲ ಪ್ರಯಾಣ ಸ್ಥಗಿತವಾಗಿತ್ತು.
ಮಳೆ ನೀರಿನಿಂದ ಭೂಮಿಯಲ್ಲಿ ಚಿಮ್ಮಿರಬಹುದು ಎಂದು ಕೆಲವರು ಹೇಳಿದರೇ, ಮತ್ತೆ ಕೆಲವರು ಕೆರೆಗಳಿಗೆ ನೀರು ತುಂಬಿಸುವ ಪೈಪ್ ಹೊಡೆದು ಹೋಗಿದ್ದು, ನೀರು ಮರದೆತ್ತರಕ್ಕೆ ಚಿಮ್ಮುತ್ತಿದೆ ಆ ಮೂಲಕ ನೀರು ಪೋಲಾಗುತ್ತಿದೆ ಎಂದು ಕೆಲವರು ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…