ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು, ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಕೊಡಗು ಜಿಲ್ಲಾಡಳಿತದ ಮಾಹಿತಿ ಪ್ರಕಾರ ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 775 ಮಿ.ಮೀ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 260.71 ಮಿ.ಮೀ ಮಳೆಯಾಗಿತ್ತು.
ಮಳೆ ಹಾಗೂ ಕೃಷಿ ಚಟುವಟಿಕೆ ಬಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದು, ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ಈಗಾಗಲೇ ಮುಸುಕಿನ ಜೋಳ ಬಿತ್ತನೆ ಕಾರ್ಯವು 77 ಹೆಕ್ಟೇರ್ ಪ್ರದೇಶದಲ್ಲಿ ಪೂರ್ಣಗೊಂಡಿದೆ. ಹಾಗೆಯೇ ಭತ್ತ ಸಸಿಮಡಿ ಕಾರ್ಯ ಆರಂಭವಾಗಿದೆ ಎಂದು ಹೇಳಿದ್ದಾರೆ.
ಮೇ ತಿಂಗಳಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ, ಜೂನ್ನಲ್ಲಿ ಸುರಿದ ನೈರುತ್ಯ ಮುಂಗಾರು ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯನ್ನು ಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಗತಿಯಲ್ಲಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.
ಇನ್ನೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ ಭತ್ತ, ಮುಸುಕಿನಜೋಳವನ್ನು ಪ್ರಮುಖವಾಗಿ ಬೆಳೆಯಲಾಗುತ್ತದೆ. ಮುಸುಕಿನ ಜೋಳ ಬಿತ್ತನೆ ಕಾರ್ಯವು ಪ್ರಾರಂಭಗೊಂಡಿದ್ದು, ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನು ಮಾಡಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…