ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ.
ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ.
ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದರು. ಇದನ್ನು ಆಕ್ಷೇಪಿಸಿದ ಪತಿ ನಾಯಕಂಡ ಬೋಪಣ್ಣ, ಈ ವಿಚಾರವಾಗಿ ರಾತ್ರಿಯೆಲ್ಲ ಜಗಳ ನಡೆಸಿ ಇಂದು(ಜು.20) ಬೆಳಗ್ಗೆ ಗುಂಡಿಕ್ಕಿ ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ.
ಶಿಲ್ಪ ಸೀತಮ್ಮ 2012 ರಿಂದ 2017 ರವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು. ಹತ್ಯೆ ಬಳಿಕ ಆರೋಪಿ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…