ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ.
ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ.
ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದರು. ಇದನ್ನು ಆಕ್ಷೇಪಿಸಿದ ಪತಿ ನಾಯಕಂಡ ಬೋಪಣ್ಣ, ಈ ವಿಚಾರವಾಗಿ ರಾತ್ರಿಯೆಲ್ಲ ಜಗಳ ನಡೆಸಿ ಇಂದು(ಜು.20) ಬೆಳಗ್ಗೆ ಗುಂಡಿಕ್ಕಿ ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ.
ಶಿಲ್ಪ ಸೀತಮ್ಮ 2012 ರಿಂದ 2017 ರವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು. ಹತ್ಯೆ ಬಳಿಕ ಆರೋಪಿ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…