ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕಾಫಿ ತೋಟದಿಂದ ಏಕಾಏಕಿ ರಸ್ತೆ ದಾಟಲು ಬಂದ ಕಾಡುಕೋಣ ಕರಡಿಗೋಡು ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ತೆರಳುತ್ತಿದ್ದ ವಾಹನಕ್ಕೆ ಅಡ್ಡ ಬಂದಿದೆ. ವಾಹನಕ್ಕೆ ಕಾಡುಕೋಣ ಡಿಕ್ಕಿಯಾದ ಪರಿಣಾಮ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ವಾಹನದ ಚಾಲಕ ಹಾಗೂ ಓರ್ವ ಕಾರ್ಮಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದು ವಿರಾಜಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ, ಉಪವಲಯ ಅರಣ್ಯಧಿಕಾರಿ ಸಂಜೀತ್ ಸೋಮಯ್ಯ, ತಿತಿಮತಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್, ಆನೆ ಚೌಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೆವರಾಜ್ ಮತ್ತು ಆರ್ಆರ್ಟಿ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಗೊಂಡ ಕಾಡುಕೋಣಕ್ಕೆ ಆನೆಚೌಕೂರು ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲು ನಿರ್ದರಿಸಲಾಗಿದ್ದು, ಅಲ್ಲಿಗೆ ಕೊಂಡೊಯ್ಯಲಾಗಿದೆ.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…