ಕೊಡಗು

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಕಾಫಿ ತೋಟದಿಂದ ಏಕಾಏಕಿ ರಸ್ತೆ ದಾಟಲು ಬಂದ ಕಾಡುಕೋಣ ಕರಡಿಗೋಡು ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ತೆರಳುತ್ತಿದ್ದ ವಾಹನಕ್ಕೆ ಅಡ್ಡ ಬಂದಿದೆ. ವಾಹನಕ್ಕೆ ಕಾಡುಕೋಣ ಡಿಕ್ಕಿಯಾದ ಪರಿಣಾಮ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ವಾಹನದ ಚಾಲಕ ಹಾಗೂ ಓರ್ವ ಕಾರ್ಮಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದು ವಿರಾಜಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ, ಉಪವಲಯ ಅರಣ್ಯಧಿಕಾರಿ ಸಂಜೀತ್ ಸೋಮಯ್ಯ, ತಿತಿಮತಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್, ಆನೆ ಚೌಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೆವರಾಜ್ ಮತ್ತು ಆರ್‌ಆರ್‌ಟಿ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಾಯಗೊಂಡ ಕಾಡುಕೋಣಕ್ಕೆ ಆನೆಚೌಕೂರು ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲು ನಿರ್ದರಿಸಲಾಗಿದ್ದು, ಅಲ್ಲಿಗೆ ಕೊಂಡೊಯ್ಯಲಾಗಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

4 mins ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

18 mins ago

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

1 hour ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

3 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

3 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

4 hours ago