Categories: ಕೊಡಗು

ಮಡಿಕೇರಿ | ಕಾಡುಕೋಣ ಬೇಟೆ: ಇಬ್ಬರ ಬಂಧನ

ಸಿದ್ದಾಪುರ : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿ ವರೆಗುಂದ ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳನ್ನು ಗುಂಡಿಟ್ಟು ಕೊಂದ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಅಸ್ಕರ್ (26) ಹಾಗೂ ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿ ವಿನೋದ್ ಕುಮಾರ್ (34) ಎಂಬುವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಕಳೆದ ಮಾ.31ರಂದು ಕುಶಾಲನಗರ ವಲಯದ ಅವರೆಗುಂದ ಮೀಸಲು ಅರಣ್ಯಕ್ಕೆ ದುಷ್ಕರ್ಮಿಗಳು ಅಕ್ರಮ ಪ್ರವೇಶ ಮಾಡಿ ರಾತ್ರಿ ವೇಳೆ ಕಾಡುಕೋಣಗಳನ್ನು ಕೊಂದಿದ್ದರು. ಅರಣ್ಯದಲ್ಲಿ ಗುಂಡಿನ ಶಬ್ದ ಕೇಳಿದ ಸಂದರ್ಭ ಅವರೆಗುಂದ ನಿವಾಸಿಗಳು ಅರಣ್ಯಕ್ಕೆ ಧಾವಿಸಿದ್ದು, ಎರಡು ಕಾಡುಕೋಣಗಳು ಬಲಿಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಕೂಡುಗದ್ದೆ ನಿವಾಸಿ ಸೂರಿ ಸುಬ್ರಮಣ್ಯ ಸೇರಿದಂತೆ ನಾಲ್ಕು ಮಂದಿ ಪರಾರಿಯಾಗಿದ್ದು, ಅಧಿಕಾರಿಗಳು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಕಾಡುಕೋಣ ಹತ್ಯೆಗೆ ಬಳಸಿದ್ದ ಬಂದೂಕು ಹಾಗೂ ಕಾರು ಪತ್ತೆಯಾಗಿಲ್ಲ.

ಕಾರ್ಯಾಚರಣೆಯಲ್ಲಿ ಎ.ಸಿ.ಎಫ್. ಗೋಪಾಲ್.ಎ.ಎ., ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

24 mins ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

1 hour ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

2 hours ago

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

3 hours ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

3 hours ago