ಸಿದ್ದಾಪುರ : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿ ವರೆಗುಂದ ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳನ್ನು ಗುಂಡಿಟ್ಟು ಕೊಂದ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಅಸ್ಕರ್ (26) ಹಾಗೂ ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿ ವಿನೋದ್ ಕುಮಾರ್ (34) ಎಂಬುವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಕಳೆದ ಮಾ.31ರಂದು ಕುಶಾಲನಗರ ವಲಯದ ಅವರೆಗುಂದ ಮೀಸಲು ಅರಣ್ಯಕ್ಕೆ ದುಷ್ಕರ್ಮಿಗಳು ಅಕ್ರಮ ಪ್ರವೇಶ ಮಾಡಿ ರಾತ್ರಿ ವೇಳೆ ಕಾಡುಕೋಣಗಳನ್ನು ಕೊಂದಿದ್ದರು. ಅರಣ್ಯದಲ್ಲಿ ಗುಂಡಿನ ಶಬ್ದ ಕೇಳಿದ ಸಂದರ್ಭ ಅವರೆಗುಂದ ನಿವಾಸಿಗಳು ಅರಣ್ಯಕ್ಕೆ ಧಾವಿಸಿದ್ದು, ಎರಡು ಕಾಡುಕೋಣಗಳು ಬಲಿಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದರು.
ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಕೂಡುಗದ್ದೆ ನಿವಾಸಿ ಸೂರಿ ಸುಬ್ರಮಣ್ಯ ಸೇರಿದಂತೆ ನಾಲ್ಕು ಮಂದಿ ಪರಾರಿಯಾಗಿದ್ದು, ಅಧಿಕಾರಿಗಳು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಕಾಡುಕೋಣ ಹತ್ಯೆಗೆ ಬಳಸಿದ್ದ ಬಂದೂಕು ಹಾಗೂ ಕಾರು ಪತ್ತೆಯಾಗಿಲ್ಲ.
ಕಾರ್ಯಾಚರಣೆಯಲ್ಲಿ ಎ.ಸಿ.ಎಫ್. ಗೋಪಾಲ್.ಎ.ಎ., ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…