* ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಸಂಕೇತ್ ಪೂವಯ್ಯ ಭೇಟಿ -ಕುಟುಂಬಸ್ಥರಿಗೆ ಸಾಂತ್ವನ
ಸಿದ್ದಾಪುರ : ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ ಸೊಳ್ಳೆ ಕೋಡಿ ಚಿಣ್ಣಪ್ಪ (76) ಎಂಬುವರು ಇಂದು ಬೆಳಗಿನ ಜಾವ 2 ಗಂಟೆ ಸಮಯಕ್ಕೆ ಕರಡಿಗೋಡುವಿನ ಬಸವನಹಳ್ಳಿ ಹಾಡಿ ಸಮೀಪದಲ್ಲಿರುವ ಮನೆಯಿಂದ ಹೊರಗೆ ಬಂದ ಸಂದರ್ಭ ಮನೆಯ ಮುಂಭಾಗದಲ್ಲಿದ್ದ ಕಾಡಾನೆ ಅವರ ಮೇಲೆ ದಿಢೀರ್ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಬೆಳಗಿನ ಜಾವ ಸುಮಾರು 4 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಿದರು.
ನಂತರ 5 ಗಂಟೆ ಹೊತ್ತಿಗೆ ಮೃತದೇಹವನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆಯವರು ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಸಿದ್ದಾಪುರ ಕಾಂಗ್ರೆಸ್ ಪಕ್ಷದ ಝೋನಲ್ ಅಧ್ಯಕ್ಷರಾದ ಎಸ್. ಬಿ ಪ್ರತೀಶ್ ವಲಯ ಅರಣ್ಯ ಅಧಿಕಾರಿ ರತನ್ ಹಾಗೂ ಸಿಬ್ಬಂದಿಗಳು, ಸಿದ್ದಾಪುರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳದಲ್ಲಿ ಹಾಜರಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…