* ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಸಂಕೇತ್ ಪೂವಯ್ಯ ಭೇಟಿ -ಕುಟುಂಬಸ್ಥರಿಗೆ ಸಾಂತ್ವನ
ಸಿದ್ದಾಪುರ : ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ ಸೊಳ್ಳೆ ಕೋಡಿ ಚಿಣ್ಣಪ್ಪ (76) ಎಂಬುವರು ಇಂದು ಬೆಳಗಿನ ಜಾವ 2 ಗಂಟೆ ಸಮಯಕ್ಕೆ ಕರಡಿಗೋಡುವಿನ ಬಸವನಹಳ್ಳಿ ಹಾಡಿ ಸಮೀಪದಲ್ಲಿರುವ ಮನೆಯಿಂದ ಹೊರಗೆ ಬಂದ ಸಂದರ್ಭ ಮನೆಯ ಮುಂಭಾಗದಲ್ಲಿದ್ದ ಕಾಡಾನೆ ಅವರ ಮೇಲೆ ದಿಢೀರ್ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಬೆಳಗಿನ ಜಾವ ಸುಮಾರು 4 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಿದರು.
ನಂತರ 5 ಗಂಟೆ ಹೊತ್ತಿಗೆ ಮೃತದೇಹವನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆಯವರು ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಸಿದ್ದಾಪುರ ಕಾಂಗ್ರೆಸ್ ಪಕ್ಷದ ಝೋನಲ್ ಅಧ್ಯಕ್ಷರಾದ ಎಸ್. ಬಿ ಪ್ರತೀಶ್ ವಲಯ ಅರಣ್ಯ ಅಧಿಕಾರಿ ರತನ್ ಹಾಗೂ ಸಿಬ್ಬಂದಿಗಳು, ಸಿದ್ದಾಪುರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳದಲ್ಲಿ ಹಾಜರಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…