Chamarajanagar elephant killed farmer
ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ ಹಾಗೂ ಪ್ರಯಾಣಿಕರು ಪಾರಾಗಿರುವ ಘಟನೆ ವರದಿಯಾಗಿದೆ.
ಬೆಳಿಗ್ಗೆ ೫.೩೦ರಲ್ಲಿ ಗದ್ದೆಹಳ್ಳದ ಗಿರಿಯಪ್ಪಮನೆ ನಿವಾಸಿ ಅಲಿ ಎಂಬವರು ತನ್ನ ಆಟೋ ರಿಕ್ಷಾದಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರನ್ನು ಚೆಟ್ಟಹಳ್ಳಿಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಪೊನ್ನತ್ಮೊಟ್ಟೆ ಬಳಿಯಲ್ಲಿ ಏಕಾಏಕಿ ತೋಟದಿಂದ ಒಂಟಿ ಸಲಗವೊಂದು ರಸ್ತೆಗಿಳಿದು ಆಟೋ ರಿಕ್ಷಾವನ್ನು ಕಂಡು ಬೆನ್ನಟ್ಟಿದೆ. ಚಾಲಕನ ಸಮಯ ಪ್ರಜ್ಞೆಯಿಂದ ವಾಹನವನ್ನು ಅತಿ ವೇಗವಾಗಿ ಚಲಾಯಿಸುವ ಮೂಲಕ ತಾನು ಹಾಗೂ ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ.
ಈ ಭಾಗದಲ್ಲಿ ಪದೇ ಪದೇ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸಿ ವಾಹನಗಳ ಮೇಲೆ ದಾಳಿ ನಡೆಸಿರುವ ಅದೆಷ್ಟೋ ಪ್ರಕರಣಗಳು ವರದಿಯಾಗಿವೆ. ಇದರಿಂದ ಈ ಭಾಗದ ನಿವಾಸಿಗಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ. ಸಂಬಂಧಿಸಿದ ಅರಣ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…