ಕೊಡಗು

ಆಟೋ ಚಾಲಕ ಮೇಲೆ ಕಾಡಾನೆ ದಾಳಿಗೆ ಯತ್ನ

ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ ಹಾಗೂ ಪ್ರಯಾಣಿಕರು ಪಾರಾಗಿರುವ ಘಟನೆ ವರದಿಯಾಗಿದೆ.

ಬೆಳಿಗ್ಗೆ ೫.೩೦ರಲ್ಲಿ ಗದ್ದೆಹಳ್ಳದ ಗಿರಿಯಪ್ಪಮನೆ ನಿವಾಸಿ ಅಲಿ ಎಂಬವರು ತನ್ನ ಆಟೋ ರಿಕ್ಷಾದಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರನ್ನು ಚೆಟ್ಟಹಳ್ಳಿಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಪೊನ್ನತ್‌ಮೊಟ್ಟೆ ಬಳಿಯಲ್ಲಿ ಏಕಾಏಕಿ ತೋಟದಿಂದ ಒಂಟಿ ಸಲಗವೊಂದು ರಸ್ತೆಗಿಳಿದು ಆಟೋ ರಿಕ್ಷಾವನ್ನು ಕಂಡು ಬೆನ್ನಟ್ಟಿದೆ. ಚಾಲಕನ ಸಮಯ ಪ್ರಜ್ಞೆಯಿಂದ ವಾಹನವನ್ನು ಅತಿ ವೇಗವಾಗಿ ಚಲಾಯಿಸುವ ಮೂಲಕ ತಾನು ಹಾಗೂ ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ.

ಈ ಭಾಗದಲ್ಲಿ ಪದೇ ಪದೇ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸಿ ವಾಹನಗಳ ಮೇಲೆ ದಾಳಿ ನಡೆಸಿರುವ ಅದೆಷ್ಟೋ ಪ್ರಕರಣಗಳು ವರದಿಯಾಗಿವೆ. ಇದರಿಂದ ಈ ಭಾಗದ ನಿವಾಸಿಗಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ. ಸಂಬಂಧಿಸಿದ ಅರಣ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago