Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿಗೆ ಯತ್ನ: ಪ್ರಾಣಪಾಯದಿಂದ ಪಾರು

ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ.

ಕಾರ್ಮಿಕ ಮಹಿಳೆ ಕವಿತಾ (40) ಗಾಯಗೊಂಡವರು. ನೆಲ್ಯಹುದಿಕೇರಿ, ಅತ್ತಿಮಂಗಲ,ನಲ್ವತ್ತೆಕ್ರೆ ಭಾಗದಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು.

ಬೆಳಗಿನಿಂದ ಹುಡುಕಾಟ ನಡೆಸಿದರೂ ಕಾಡನೆಗಳು ಮಾತ್ರ ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ವೇಳೆಯಲ್ಲಿ ಕಾಫಿ ತೋಟ ಒಂದರಲ್ಲಿ ಒಂಟಿ ಸಲಗ ಕಾಣಿಸಿಕೊಂಡಿತ್ತು . ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಫಿ ತೋಟಮಾರ್ಗ ಮಧ್ಯದಿಂದ ಅರಣ್ಯಕ್ಕೆ ಓಡಿಸಲು ಮುಂದಾಗಿದ್ದರು.

ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿದ ಕಾಡಾನೆ ನಂತರ ಮನೆಯೊಂದರ ಸಮೀಪದ ಹಲಸಿನ ಮರ ಬಳಿ ನಿಂತಿತ್ತು. ಈ ಸಂದರ್ಭ ಸಮೀಪದ ತೋಟದಲ್ಲಿ ಕೆಲಸ ನಿರ್ವಹಿಸಿ ಮನೆಗೆ ಬರುತ್ತಿದ್ದ ಮಹಿಳೆಯನ್ನ ಕಂಡ ಕಾಡಾನೆ ದಾಳಿಗೆ ಯತ್ನಿಸಿತ್ತು . ಕಾಡಾನೆದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮಹಿಳೆ ಬಿದ್ದು ಗಂಭೀರ ಗಾಯಗೊಂಡರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮಹಿಳೆಯನ್ನ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದಾಖಲಿಸಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್ ಎಫ್ ಓ ರತನ್ ಕುಮಾರ್ , ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:
error: Content is protected !!