ಕೊಡಗು

ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿಗೆ ಯತ್ನ: ಪ್ರಾಣಪಾಯದಿಂದ ಪಾರು

ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ.

ಕಾರ್ಮಿಕ ಮಹಿಳೆ ಕವಿತಾ (40) ಗಾಯಗೊಂಡವರು. ನೆಲ್ಯಹುದಿಕೇರಿ, ಅತ್ತಿಮಂಗಲ,ನಲ್ವತ್ತೆಕ್ರೆ ಭಾಗದಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು.

ಬೆಳಗಿನಿಂದ ಹುಡುಕಾಟ ನಡೆಸಿದರೂ ಕಾಡನೆಗಳು ಮಾತ್ರ ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ವೇಳೆಯಲ್ಲಿ ಕಾಫಿ ತೋಟ ಒಂದರಲ್ಲಿ ಒಂಟಿ ಸಲಗ ಕಾಣಿಸಿಕೊಂಡಿತ್ತು . ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಫಿ ತೋಟಮಾರ್ಗ ಮಧ್ಯದಿಂದ ಅರಣ್ಯಕ್ಕೆ ಓಡಿಸಲು ಮುಂದಾಗಿದ್ದರು.

ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿದ ಕಾಡಾನೆ ನಂತರ ಮನೆಯೊಂದರ ಸಮೀಪದ ಹಲಸಿನ ಮರ ಬಳಿ ನಿಂತಿತ್ತು. ಈ ಸಂದರ್ಭ ಸಮೀಪದ ತೋಟದಲ್ಲಿ ಕೆಲಸ ನಿರ್ವಹಿಸಿ ಮನೆಗೆ ಬರುತ್ತಿದ್ದ ಮಹಿಳೆಯನ್ನ ಕಂಡ ಕಾಡಾನೆ ದಾಳಿಗೆ ಯತ್ನಿಸಿತ್ತು . ಕಾಡಾನೆದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮಹಿಳೆ ಬಿದ್ದು ಗಂಭೀರ ಗಾಯಗೊಂಡರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮಹಿಳೆಯನ್ನ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದಾಖಲಿಸಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್ ಎಫ್ ಓ ರತನ್ ಕುಮಾರ್ , ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

3 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

5 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago