ಕೊಡಗು

ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿಗೆ ಯತ್ನ: ಪ್ರಾಣಪಾಯದಿಂದ ಪಾರು

ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ.

ಕಾರ್ಮಿಕ ಮಹಿಳೆ ಕವಿತಾ (40) ಗಾಯಗೊಂಡವರು. ನೆಲ್ಯಹುದಿಕೇರಿ, ಅತ್ತಿಮಂಗಲ,ನಲ್ವತ್ತೆಕ್ರೆ ಭಾಗದಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು.

ಬೆಳಗಿನಿಂದ ಹುಡುಕಾಟ ನಡೆಸಿದರೂ ಕಾಡನೆಗಳು ಮಾತ್ರ ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ವೇಳೆಯಲ್ಲಿ ಕಾಫಿ ತೋಟ ಒಂದರಲ್ಲಿ ಒಂಟಿ ಸಲಗ ಕಾಣಿಸಿಕೊಂಡಿತ್ತು . ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಫಿ ತೋಟಮಾರ್ಗ ಮಧ್ಯದಿಂದ ಅರಣ್ಯಕ್ಕೆ ಓಡಿಸಲು ಮುಂದಾಗಿದ್ದರು.

ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿದ ಕಾಡಾನೆ ನಂತರ ಮನೆಯೊಂದರ ಸಮೀಪದ ಹಲಸಿನ ಮರ ಬಳಿ ನಿಂತಿತ್ತು. ಈ ಸಂದರ್ಭ ಸಮೀಪದ ತೋಟದಲ್ಲಿ ಕೆಲಸ ನಿರ್ವಹಿಸಿ ಮನೆಗೆ ಬರುತ್ತಿದ್ದ ಮಹಿಳೆಯನ್ನ ಕಂಡ ಕಾಡಾನೆ ದಾಳಿಗೆ ಯತ್ನಿಸಿತ್ತು . ಕಾಡಾನೆದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮಹಿಳೆ ಬಿದ್ದು ಗಂಭೀರ ಗಾಯಗೊಂಡರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮಹಿಳೆಯನ್ನ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದಾಖಲಿಸಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್ ಎಫ್ ಓ ರತನ್ ಕುಮಾರ್ , ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

8 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

21 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

43 mins ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

1 hour ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

2 hours ago