ಕೊಡಗು

ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿಗೆ ಯತ್ನ: ಪ್ರಾಣಪಾಯದಿಂದ ಪಾರು

ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ.

ಕಾರ್ಮಿಕ ಮಹಿಳೆ ಕವಿತಾ (40) ಗಾಯಗೊಂಡವರು. ನೆಲ್ಯಹುದಿಕೇರಿ, ಅತ್ತಿಮಂಗಲ,ನಲ್ವತ್ತೆಕ್ರೆ ಭಾಗದಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು.

ಬೆಳಗಿನಿಂದ ಹುಡುಕಾಟ ನಡೆಸಿದರೂ ಕಾಡನೆಗಳು ಮಾತ್ರ ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ವೇಳೆಯಲ್ಲಿ ಕಾಫಿ ತೋಟ ಒಂದರಲ್ಲಿ ಒಂಟಿ ಸಲಗ ಕಾಣಿಸಿಕೊಂಡಿತ್ತು . ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಫಿ ತೋಟಮಾರ್ಗ ಮಧ್ಯದಿಂದ ಅರಣ್ಯಕ್ಕೆ ಓಡಿಸಲು ಮುಂದಾಗಿದ್ದರು.

ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿದ ಕಾಡಾನೆ ನಂತರ ಮನೆಯೊಂದರ ಸಮೀಪದ ಹಲಸಿನ ಮರ ಬಳಿ ನಿಂತಿತ್ತು. ಈ ಸಂದರ್ಭ ಸಮೀಪದ ತೋಟದಲ್ಲಿ ಕೆಲಸ ನಿರ್ವಹಿಸಿ ಮನೆಗೆ ಬರುತ್ತಿದ್ದ ಮಹಿಳೆಯನ್ನ ಕಂಡ ಕಾಡಾನೆ ದಾಳಿಗೆ ಯತ್ನಿಸಿತ್ತು . ಕಾಡಾನೆದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮಹಿಳೆ ಬಿದ್ದು ಗಂಭೀರ ಗಾಯಗೊಂಡರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮಹಿಳೆಯನ್ನ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದಾಖಲಿಸಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್ ಎಫ್ ಓ ರತನ್ ಕುಮಾರ್ , ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago