ಕೊಡಗು

ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾವೇರಿ ನದಿಯಲ್ಲಿ ಕಾಡಾನೆ ಮೃತದೇಹ ಬುಧವಾರ ಕಂಡುಬಂದಿತ್ತು. ನದಿಯ ಮಧ್ಯಭಾಗದಲ್ಲಿ ಮೃತದೇಹವಿದ್ದಿದ್ದರಿಂದ ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ. ಆನೆಯ ಮೃತದೇಹವನ್ನು ನದಿಯ ಮಧ್ಯಭಾಗದಿಂದ ತರಲು ಸಾಕಾನೆ ಹಾಗೂ ಬೋಟು ಅವಶ್ಯಕತೆ ಇದ್ದ ಕಾರಣ ಗುರುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ಗುರುವಾರ ಬೆಳಗ್ಗೆ ಬೋಟಿನ ವ್ಯವಸ್ಥೆ ಮಾಡಿಕೊಂಡು ಸಾಕಾನೆಯ ಸಹಾಯದಿಂದ ನದಿಯಿಂದ ಮೃತದೇಹವನ್ನು ಹೊರ ತರಲಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ ಎ.ಎ, ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್, ಮುಖ್ಯ ವಶುವೈಧ್ಯಾಧಿಕಾರಿ ಡಾ. ಮುಜೀಬ್ ಹಾಗೂ ಪಶುವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಸಮ್ಮುಖದಲ್ಲಿ ಮೃತಪಟ್ಟ ಆನೆಯನ್ನು ನದಿ ಮಧ್ಯದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮೃತಪಟ್ಟ ಆನೆಯು ಹೆಣ್ಣು ಕಾಡಾನೆಯಾಗಿದ್ದು, ಯಾವುದೇ ಗುಂಡು ತಗುಲಿರುವುದು, ವಿದ್ಯುತ್ ಸ್ಪಶಗಳಂತಹ ಕಾರಣದಿಂದ ಮೃತಪಟ್ಟಿಲ್ಲ. ನದಿ ನೀರಿನಲ್ಲಿ ಮುಳುಗಿಯೇ ಕಾಡಾನೆ ಸತ್ತಿರುವ ಬಗ್ಗೆ ಪಶು ವೈದ್ಯಾಧಿಕಾರಿಗಳು ದೃಢಪಡಿಸಿರುವುದಾಗಿ ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

2 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

3 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

3 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

3 hours ago