ಕೊಡಗು

ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾವೇರಿ ನದಿಯಲ್ಲಿ ಕಾಡಾನೆ ಮೃತದೇಹ ಬುಧವಾರ ಕಂಡುಬಂದಿತ್ತು. ನದಿಯ ಮಧ್ಯಭಾಗದಲ್ಲಿ ಮೃತದೇಹವಿದ್ದಿದ್ದರಿಂದ ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ. ಆನೆಯ ಮೃತದೇಹವನ್ನು ನದಿಯ ಮಧ್ಯಭಾಗದಿಂದ ತರಲು ಸಾಕಾನೆ ಹಾಗೂ ಬೋಟು ಅವಶ್ಯಕತೆ ಇದ್ದ ಕಾರಣ ಗುರುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ಗುರುವಾರ ಬೆಳಗ್ಗೆ ಬೋಟಿನ ವ್ಯವಸ್ಥೆ ಮಾಡಿಕೊಂಡು ಸಾಕಾನೆಯ ಸಹಾಯದಿಂದ ನದಿಯಿಂದ ಮೃತದೇಹವನ್ನು ಹೊರ ತರಲಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ ಎ.ಎ, ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್, ಮುಖ್ಯ ವಶುವೈಧ್ಯಾಧಿಕಾರಿ ಡಾ. ಮುಜೀಬ್ ಹಾಗೂ ಪಶುವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಸಮ್ಮುಖದಲ್ಲಿ ಮೃತಪಟ್ಟ ಆನೆಯನ್ನು ನದಿ ಮಧ್ಯದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮೃತಪಟ್ಟ ಆನೆಯು ಹೆಣ್ಣು ಕಾಡಾನೆಯಾಗಿದ್ದು, ಯಾವುದೇ ಗುಂಡು ತಗುಲಿರುವುದು, ವಿದ್ಯುತ್ ಸ್ಪಶಗಳಂತಹ ಕಾರಣದಿಂದ ಮೃತಪಟ್ಟಿಲ್ಲ. ನದಿ ನೀರಿನಲ್ಲಿ ಮುಳುಗಿಯೇ ಕಾಡಾನೆ ಸತ್ತಿರುವ ಬಗ್ಗೆ ಪಶು ವೈದ್ಯಾಧಿಕಾರಿಗಳು ದೃಢಪಡಿಸಿರುವುದಾಗಿ ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago