ಕೊಡಗು

ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾವೇರಿ ನದಿಯಲ್ಲಿ ಕಾಡಾನೆ ಮೃತದೇಹ ಬುಧವಾರ ಕಂಡುಬಂದಿತ್ತು. ನದಿಯ ಮಧ್ಯಭಾಗದಲ್ಲಿ ಮೃತದೇಹವಿದ್ದಿದ್ದರಿಂದ ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ. ಆನೆಯ ಮೃತದೇಹವನ್ನು ನದಿಯ ಮಧ್ಯಭಾಗದಿಂದ ತರಲು ಸಾಕಾನೆ ಹಾಗೂ ಬೋಟು ಅವಶ್ಯಕತೆ ಇದ್ದ ಕಾರಣ ಗುರುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ಗುರುವಾರ ಬೆಳಗ್ಗೆ ಬೋಟಿನ ವ್ಯವಸ್ಥೆ ಮಾಡಿಕೊಂಡು ಸಾಕಾನೆಯ ಸಹಾಯದಿಂದ ನದಿಯಿಂದ ಮೃತದೇಹವನ್ನು ಹೊರ ತರಲಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ ಎ.ಎ, ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್, ಮುಖ್ಯ ವಶುವೈಧ್ಯಾಧಿಕಾರಿ ಡಾ. ಮುಜೀಬ್ ಹಾಗೂ ಪಶುವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಸಮ್ಮುಖದಲ್ಲಿ ಮೃತಪಟ್ಟ ಆನೆಯನ್ನು ನದಿ ಮಧ್ಯದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮೃತಪಟ್ಟ ಆನೆಯು ಹೆಣ್ಣು ಕಾಡಾನೆಯಾಗಿದ್ದು, ಯಾವುದೇ ಗುಂಡು ತಗುಲಿರುವುದು, ವಿದ್ಯುತ್ ಸ್ಪಶಗಳಂತಹ ಕಾರಣದಿಂದ ಮೃತಪಟ್ಟಿಲ್ಲ. ನದಿ ನೀರಿನಲ್ಲಿ ಮುಳುಗಿಯೇ ಕಾಡಾನೆ ಸತ್ತಿರುವ ಬಗ್ಗೆ ಪಶು ವೈದ್ಯಾಧಿಕಾರಿಗಳು ದೃಢಪಡಿಸಿರುವುದಾಗಿ ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

2 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

2 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

6 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

6 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

7 hours ago