ಕೊಡಗು

ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾವೇರಿ ನದಿಯಲ್ಲಿ ಕಾಡಾನೆ ಮೃತದೇಹ ಬುಧವಾರ ಕಂಡುಬಂದಿತ್ತು. ನದಿಯ ಮಧ್ಯಭಾಗದಲ್ಲಿ ಮೃತದೇಹವಿದ್ದಿದ್ದರಿಂದ ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ. ಆನೆಯ ಮೃತದೇಹವನ್ನು ನದಿಯ ಮಧ್ಯಭಾಗದಿಂದ ತರಲು ಸಾಕಾನೆ ಹಾಗೂ ಬೋಟು ಅವಶ್ಯಕತೆ ಇದ್ದ ಕಾರಣ ಗುರುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ಗುರುವಾರ ಬೆಳಗ್ಗೆ ಬೋಟಿನ ವ್ಯವಸ್ಥೆ ಮಾಡಿಕೊಂಡು ಸಾಕಾನೆಯ ಸಹಾಯದಿಂದ ನದಿಯಿಂದ ಮೃತದೇಹವನ್ನು ಹೊರ ತರಲಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ ಎ.ಎ, ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್, ಮುಖ್ಯ ವಶುವೈಧ್ಯಾಧಿಕಾರಿ ಡಾ. ಮುಜೀಬ್ ಹಾಗೂ ಪಶುವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಸಮ್ಮುಖದಲ್ಲಿ ಮೃತಪಟ್ಟ ಆನೆಯನ್ನು ನದಿ ಮಧ್ಯದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮೃತಪಟ್ಟ ಆನೆಯು ಹೆಣ್ಣು ಕಾಡಾನೆಯಾಗಿದ್ದು, ಯಾವುದೇ ಗುಂಡು ತಗುಲಿರುವುದು, ವಿದ್ಯುತ್ ಸ್ಪಶಗಳಂತಹ ಕಾರಣದಿಂದ ಮೃತಪಟ್ಟಿಲ್ಲ. ನದಿ ನೀರಿನಲ್ಲಿ ಮುಳುಗಿಯೇ ಕಾಡಾನೆ ಸತ್ತಿರುವ ಬಗ್ಗೆ ಪಶು ವೈದ್ಯಾಧಿಕಾರಿಗಳು ದೃಢಪಡಿಸಿರುವುದಾಗಿ ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

47 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago