ಕೊಡಗು

ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ಸಾವು

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾವೇರಿ ನದಿಯಲ್ಲಿ ಕಾಡಾನೆ ಮೃತದೇಹ ಬುಧವಾರ ಕಂಡುಬಂದಿತ್ತು. ನದಿಯ ಮಧ್ಯಭಾಗದಲ್ಲಿ ಮೃತದೇಹವಿದ್ದಿದ್ದರಿಂದ ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ. ಆನೆಯ ಮೃತದೇಹವನ್ನು ನದಿಯ ಮಧ್ಯಭಾಗದಿಂದ ತರಲು ಸಾಕಾನೆ ಹಾಗೂ ಬೋಟು ಅವಶ್ಯಕತೆ ಇದ್ದ ಕಾರಣ ಗುರುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ಗುರುವಾರ ಬೆಳಗ್ಗೆ ಬೋಟಿನ ವ್ಯವಸ್ಥೆ ಮಾಡಿಕೊಂಡು ಸಾಕಾನೆಯ ಸಹಾಯದಿಂದ ನದಿಯಿಂದ ಮೃತದೇಹವನ್ನು ಹೊರ ತರಲಾಯಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ ಎ.ಎ, ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್, ಮುಖ್ಯ ವಶುವೈಧ್ಯಾಧಿಕಾರಿ ಡಾ. ಮುಜೀಬ್ ಹಾಗೂ ಪಶುವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಸಮ್ಮುಖದಲ್ಲಿ ಮೃತಪಟ್ಟ ಆನೆಯನ್ನು ನದಿ ಮಧ್ಯದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮೃತಪಟ್ಟ ಆನೆಯು ಹೆಣ್ಣು ಕಾಡಾನೆಯಾಗಿದ್ದು, ಯಾವುದೇ ಗುಂಡು ತಗುಲಿರುವುದು, ವಿದ್ಯುತ್ ಸ್ಪಶಗಳಂತಹ ಕಾರಣದಿಂದ ಮೃತಪಟ್ಟಿಲ್ಲ. ನದಿ ನೀರಿನಲ್ಲಿ ಮುಳುಗಿಯೇ ಕಾಡಾನೆ ಸತ್ತಿರುವ ಬಗ್ಗೆ ಪಶು ವೈದ್ಯಾಧಿಕಾರಿಗಳು ದೃಢಪಡಿಸಿರುವುದಾಗಿ ವಲಯ ಅರಣ್ಯಾಧಿಕಾರಿ ರಕ್ಷಿತ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago