ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ.
ಇದೀಗ ಪೊನ್ನಂಪೇಟೆಯ ಪಟ್ಟಣದ ಸಮೀಪ ಈ ಆನೆ ಸುತ್ತಾಡುತ್ತಿದ್ದು ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಕೋರಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಆನೆ ಮುಖ್ಯರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಚಿತ್ರೀಕರಿಸಿದ್ದು, ಅವುಗಳ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…