ಕೊಡಗು

ಶೌಚಾಲಯದ ಸೆಫ್ಟಿಕ್‌ ಟ್ಯಾಂಕಿಗೆ ಬಿದ್ದ ಕಾಡಾನೆ ರಕ್ಷಣೆ

ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ.

ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದ ಕೀಮಲೆಕಾಡು ಎಂಬಲ್ಲಿ ಬುಧವಾರ ಮುಂಜಾನೆ ಘಟನೆ ನಡೆದಿದೆ. ಗ್ರಾಮದ ನಿವಾಸಿ ಪಟ್ರಪಂಡ ಜಗದೀಶ್ ಅಪ್ಪಯ್ಯ ಮಾಲೀಕತ್ವದ ಕೂರ್ಗ್ ಹೆರಿಟೇಜ್ ರೆಸಾರ್ಟ್ ಸಮೀಪದಲ್ಲಿ ಕಾಡಾನೆಗಳ ಗುಂಪು ಸಂಚರಿಸುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ರೆಸಾರ್ಟ್‌ನ ಶೌಚಾಲಯದ ಸೆಪ್ಟಿಕ್ ಟ್ಯಾಂಕ್ ಒಳಗಡೆ ಬಿದ್ದಿದೆ. ಟ್ಯಾಂಕಿನ ಒಳಗಡೆ ಬಿದ್ದ ಕಾಡಾನೆ ಮೇಲೇಳಲಾಗದೆ ನರಲಾಡುತ್ತಿರುವ ದೃಶ್ಯ ನೋಡುಗರ ಮನಕಲಕುವಂತಿತ್ತು. ಇದರ ಜೊತೆಗಿದ್ದ ಮತ್ತೊಂದು ಆನೆ ಸೆಪ್ಟಿಕ್ ಟ್ಯಾಂಕಿನ ಒಳಗಡೆ ಬಿದ್ದ ಆನೆಯನ್ನು ಮೇಲೇತ್ತಲು ಪ್ರಯತ್ನಪಡುವ ದೃಶ್ಯ ಕಂಡು ಬಂದಿದೆ. ಆದರೆ, ಪ್ರಯತ್ನ ಸಫಲತೆ ಕಾಣದೆ ಟ್ಯಾಂಕ್ ಒಳಗಡೆಯಿಂದ ನರಳಾಡಿದ ಕಾಡಾನೆ ಹರಸಾಹಸಪಟ್ಟು ಮೇಲೆದ್ದು ಕೊನೆಗೂ ತೋಟದೊಳಗೆ ಸಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬರುವಷ್ಟರಲ್ಲಿ ಕಾಡಾನೆ ಸೆಫ್ಟಿಕ್‌ಟ್ಯಾಂಕ್ ಒಳಗಡೆಯಿಂದ ಮೇಲೆದ್ದು ತೋಟಕ್ಕೆ ತೆರಳಿದೆ. ಬಳಿಕ ಗುಂಪಿನಿಂದ ಬೆರ್ಪಟ್ಟಿದ್ದ ಆನೆಗಳನ್ನು ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೇರ್ಪಟ್ಟಿದ್ದ ಆನೆಯನ್ನು ಗುಂಪಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಗ್ರಾಮಸ್ತರು ಭಯ ಭೀತರಾಗಿದ್ದಾರೆ. ಕಳೆದ ವರ್ಷ ಕಾಡಾನೆಯೊಂದು ಮರಿಗೆ ಈ ಗ್ರಾಮದಲ್ಲೇ ಜನ್ಮ ನೀಡಿತ್ತು. ಗ್ರಾಮದ ಪಾಲಂಗಾಲದಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದು ಮೃತಪಟ್ಟಿತ್ತು. ಆದರೂ ಕೂಡ ಅರಣ್ಯ ಇಲಾಖೆ ಹೆಚ್ಚೆತ್ತುಕೊಳ್ಳುತ್ತಿಲ್ಲ ಇಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇನ್ನಾದರೂ ಅರಣ್ಯ ಇಲಾಖೆಯವರು ಕೂಡಲೇ ಕಾಡಾನೆಯನ್ನು ಗ್ರಾಮಕ್ಕೆ ನುಸಳದಂತೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಅರಣ್ಯಧಿಕಾರಿಗಳಾದ ಆರ್‌ಎಫ್‌ಒ ಶಿವರಾಂ, ಡಿಆರ್‌ಎಫ್‌ಒ ಶ್ರೀನಿವಾಸ್, ಇಟಿಎಫ್ ಫಾರೆಸ್ಟರ್ ದೇವರಾಜ್ ಹಾಗೂ ಆರ್‌ಆರ್‌ಟಿ, ಕ್ಯಾಂಪ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

10 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

11 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

11 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

13 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

13 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

13 hours ago