ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಮಡಿಕೇರಿ ತಾಲ್ಲೂಕಿನ ಎಂ. ಚೆಂಬು ಗ್ರಾಮದಲ್ಲಿ ಕಾಡಾನೆ ವಿದ್ಯುತ್ ತಂತಿಯ ಮೇಲೆ ಬೈನೆ ಮರವನ್ನು ಬೀಳಿಸಿ ಅನಾಹುತ ಸೃಷ್ಟಿಸಿದೆ. ಕಲ್ಲುಗುಂಡಿ ಸಮೀಪದ ಎಂ. ಚೆಂಬು ಗ್ರಾಮದ ರಾಧಾಕೃಷ್ಣ ಅವರ ಮನೆ ಸಮೀಪ ಈ ಘಟನೆ ನಡೆದಿದೆ.
ಕಾಡಾನೆ ವಿದ್ಯುತ್ ತಂತಿಯ ಮೇಲೆ ಬೈನೆ ಮರವನ್ನು ಬೀಳಿಸಿದ್ದರಿಂದ ಎರಡು ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಬಿದ್ದ ಕಂಬಗಳು ಸಮೀಪದ ದನದ ಕೊಟ್ಟಿಗೆಯ ಮೇಲೂ ಬಿದ್ದು ಹಾನಿಯಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಡಾನೆಗಳ ಈ ಉಪಾಯದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ನಿರಂತರ ವನ್ಯಜೀವಿ ಹಾವಳಿಯಿಂದ ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಹಾನಿಯ ಮಾಹಿತಿ ಸಂಗ್ರಹಿಸಿದ್ದಾರೆ. ಕಾಡಾನೆಗಳ ಉಪಟಳಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ, ಗ್ರಾಮಸ್ಥರ ಜೀವ ಹಾಗೂ ಆಸ್ತಿಪಾಸ್ತಿಗೆ ರಕ್ಷಣೆ ಒದಗಿಸಬೇಕೆಂದು ಸ್ಥಳೀಯರು ಸರ್ಕಾರ ಹಾಗೂ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…