ಕೊಡಗು

ಕಾಡಾನೆ ದಾಳಿಗೆ ಮಹಿಳೆ ಬಲಿ

ಗೋಣಿಕೊಪ್ಪ: ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.

ಚೆನ್ನಂಗೊಲ್ಲಿ ಗ್ರಾಮದ ನಿವಾಸಿ ಜರ್ನಾಧನ ಅವರ ಪತ್ನಿ ಜಾನಕಿ (52) ಆನೆ ದಾಳಿಗೆ ಮೃತಪಟ್ಟ ದುರ್ದೈವಿ.

ಚೆನ್ನಂಗೊಲ್ಲಿಯ ಮನೆಯಪಂಡ ಕಾರ್ಯಪ್ಪ ಅವರ ಮಾನಿಕೊಪ್ಪ ಕಾಫಿ ತೋಟದಲ್ಲಿ ಗುರುವಾರ ಸಂಜೆ 4ರ ಸಮಯ ಕಾಫಿ ಕುಯ್ಲು ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ಜಾನಕಿಯ ತಲೆ ಭಾಗವನ್ನು ತುಳಿದಿದೆ. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೋಟದಲ್ಲಿ ಸುಮಾರು 30 ಕಾರ್ಮಿಕರು ಕಾಫಿ ಕುಯ್ಲಿನಲ್ಲಿ ತೊಡಗಿಸಿಕೊಂಡಿದ್ದರು. ಜಾನಕಿ ಹಾಗೂ ಲೀಲಾ ಎಂಬುವವರು ಕೊನೆಯದಾಗಿ ಕಾಫಿ ಬೀಜಗಳನ್ನು ಕಿತ್ತು ಬ್ಯಾಗಿನಲ್ಲಿ ತುಂಬಿ ಟ್ರ್ಯಾಕ್ಟರ್ ನಿಲ್ಲಿಸಿದ ಜಾಗಕ್ಕೆ ನಡೆದು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಜಾನಕಿಯವರ ಮರಣೋತ್ತರ ಪರೀಕ್ಷೆಯನ್ನು ಗೋಣಿಕೊಪ್ಪ ಸಮುದಾಯ ಆಸ್ಪತ್ರೆಯಲ್ಲಿ ನಡೆಸಲಾಯಿತು. ಮೂವರು ಪುತ್ರಿಯರು, ಅಳಿಯಂದಿರನ್ನು ಅಗಲಿದ್ದಾರೆ.

ಸ್ಥಳಕ್ಕೆ ಗೋಣಿಕೊಪ್ಪಲು ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ಪ್ರಮೋದ್‌ ಗಣಪತಿ, ಮಾಯಮುಡಿ ಗ್ರಾ.ಪಂ. ಆಪಟ್ಟೀರ ಟಾಟು ಮೊಣ್ಣಪ್ಪ ಭೇಟಿ ನೀಡಿದರು. ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

2 hours ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

2 hours ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

2 hours ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

3 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

3 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

3 hours ago