ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಯಲ್ಲಿ ಕಾರ್ಮಿಕ ಮಹಿಳೆ ಸುನೀತಾ ಗಂಭೀರವಾಗಿ ಗಾಯಗೊಂಡು ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಸಿದ್ದಾಪುರ ಆಸ್ಪತ್ರೆಗೆ ದಾಖಲಿಲಿಸಲಾಗಿದೆ.
ಶುಕ್ರವಾರ ಮಧ್ಯಾಹ್ನದ ವೇಳೆ ಕಾಫಿ ತೋಟದಿಂದ ಏಕಾಏಕಿ ಹೊರಬಂದ ಕಾಡಾನೆ ಕಾರ್ಮಿಕರತ್ತ ದಾಳಿ ನಡೆಸಲು ಯತ್ನಿಸಿದಾಗ ಇತರ ಕಾರ್ಮಿಕರು ಪ್ರಾಣಪಾಯದಿಂದ ಓಡಿ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದ ಆರ್ಆರ್ಟಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಕಾಡಿಗಟ್ಟಲು ಮುಂದಾದರು.
ಈ ನಡುವೆ ಕಲ್ಲಳ್ಳ-ತಟ್ಟಳ್ಳಿ ಮಾರ್ಗದ ರಸ್ತೆಯಲ್ಲಿ ನಿಲ್ಲಿಸಿದ್ದ ಪ್ರವೀಣ ಅವರಿಗೆ ಸೇರಿದ ಜೀಪಿನ ಮೇಲೆ ಕಾಡಾನೆ ದಾಳಿ ನಡೆಸಿ ವಾಹನವನ್ನು ಜಖಂಗೊಳಿಸಿದೆ. ಆನೆಯನ್ನು ಅಟ್ಟಲು ತೆರಳಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೂ ದಾಳಿ ಮಾಡಲು ಯತ್ನಿಸಿದಾಗ ಇಬ್ಬರು ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನಂತರ ಆನೆಯನ್ನು ಕಾಡಿಗಟ್ಟುವಲ್ಲಿ ಸಿಬ್ಬಂದಿ ಯಶಸ್ವಿಯಾದರು.
ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು, ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿದೆ. ಕಾಡಾನೆಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಕಾರ್ಮಿಕ ಸಂಘಟನೆಯ ಮುಖಂಡ ಮಣಿ ಒತ್ತಾಯಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…