ಕೊಡಗು: ತುಂಬು ಗರ್ಭಿಣಿಯೊಬ್ಬರು ಪ್ರಸವಕ್ಕಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭ ಮಾರ್ಗಮಧ್ಯದಲ್ಲಿಯೇ ಅಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ.
ವಿರಾಜಪೇಟೆ ಹೊರವಲಯದ ಕಂಡಂಗಾಲ ಗ್ರಾಮದ ಸಂತೋಷ್ ಅವರ ತೋಟದ ಲೈನ್ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರಾಗಿರುವ ಕಲಾಕ್ ಹಾಗೂ ಅವರ ತುಂಬು ಗರ್ಭಿಣಿ ಪತ್ನಿ ಶಾರ್ಜಾನ್ (22) ವಾಸವಾಗಿದ್ದಾರೆ.
ಇಂದು ರಾತ್ರಿ ಎಂಟು ಗಂಟೆಗೆ ಶಾರ್ಜಾನ್ ಅವರಿಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣ ತೋಟದ ಮಾಲಿಕ ಸಂತೋಷ್ ಅವರು ವಿರಾಜಪೇಟೆ ಖಾಸಗಿ ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.
ಸಂತೋಷರವರ ಸೂಚನೆಯಂತೆ ಕಂಡಂಗಾಲಕ್ಕೆ ತೆರಳಿದ ವಿರಾಜಪೇಟೆ ಅಂಬುಲೆನ್ಸ್ ಚಾಲಕ ಶೈಜು, ಶಾರ್ಜಾನ್ ಅವರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭ ಮಾರ್ಗದಲ್ಲೆ ಶಾರ್ಜಾನ್ ಅವರಿಗೆ ಪ್ರಸವ ಸಂಭವಿಸಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನಂತರ, ಆಂಬುಲೆನ್ಸ್ ಚಾಲಕ ಶಾರ್ಜಾನ್ ಹಾಗೂ ನವಜಾತ ಶಿಶುವನ್ನು ಸುರಕ್ಷಿತವಾಗಿ ವಿರಾಜಪೇಟೆ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವಲ್ಲಿ ನೆರವಾಗಿದ್ದು, ತಾಯಿ ಮತ್ತು ಮಗು ಅರೋಗ್ಯವಾಗಿದ್ದಾರೆ. ಅಲ್ಲದೇ, ಚಾಲಕ ಶೈಜು ಅವರ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…