ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ.
ಅಸ್ಸಾಂ ರಾಜ್ಯದ ಗೋಲ್ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಮೊಕದ್ದಮೆ ದಾಖಲಿಸಿ ವಿಚಾರಣೆ ಕೈಗೊಂಡಿದ್ದಾರೆ.
ಮಹಿಳೆಯೊಬ್ಬರು ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಲು ಕಾರೇಕೊಪ್ಪ ಬಸ್ ಸೆಲ್ಟರ್ನ ಪಕ್ಕದ ಮೋರಿ ಮೇಲೆ ಕುಳಿತಿದ್ದಾಗ ಆರೋಪಿ, ಮಹಿಳೆಯ ಬಾಯಿ ಮುಚ್ಚಿ, ತಲೆಕೂದಲನ್ನು ಹಿಡಿದು ಎಳೆದು, ಮಹಿಳೆಯನ್ನು ಮೋರಿಗೆ ತಳ್ಳಿ, ಮಾನಭಂಗಕ್ಕೆ ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಮಹಿಳೆ ಕೂಗಿಕೊಂಡಾಗ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಸ್ಥಳೀಯರೇ ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಎಂ.ಎ.ಗೋಪಾಲ್ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ನ್ನು 96 ರನ್ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್ನಲ್ಲಿ…
ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…