ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ.
ಅಸ್ಸಾಂ ರಾಜ್ಯದ ಗೋಲ್ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಮೊಕದ್ದಮೆ ದಾಖಲಿಸಿ ವಿಚಾರಣೆ ಕೈಗೊಂಡಿದ್ದಾರೆ.
ಮಹಿಳೆಯೊಬ್ಬರು ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಲು ಕಾರೇಕೊಪ್ಪ ಬಸ್ ಸೆಲ್ಟರ್ನ ಪಕ್ಕದ ಮೋರಿ ಮೇಲೆ ಕುಳಿತಿದ್ದಾಗ ಆರೋಪಿ, ಮಹಿಳೆಯ ಬಾಯಿ ಮುಚ್ಚಿ, ತಲೆಕೂದಲನ್ನು ಹಿಡಿದು ಎಳೆದು, ಮಹಿಳೆಯನ್ನು ಮೋರಿಗೆ ತಳ್ಳಿ, ಮಾನಭಂಗಕ್ಕೆ ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಮಹಿಳೆ ಕೂಗಿಕೊಂಡಾಗ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಸ್ಥಳೀಯರೇ ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಎಂ.ಎ.ಗೋಪಾಲ್ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…