Mysore
25
overcast clouds

Social Media

ಮಂಗಳವಾರ, 05 ಮೇ 2026
Light
Dark

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ.

ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿಯುವ ಸ್ಥಳಗಳನ್ನು ಗುರುತಿಸಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಮುಂದಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 18 ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಸುಮಾರು 94.80 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿ ಕರ್ತೋಜಿ ಗ್ರಾಮದಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಇದರಿಂದ ಹರ್ಷಗೊಂಡ ಸ್ಥಳೀಯರು ಕೇಂದ್ರ ಸರ್ಕಾರ ಹಾಗೂ ಯದುವೀರ್‌ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

Tags:
error: Content is protected !!