ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ.
ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿಯುವ ಸ್ಥಳಗಳನ್ನು ಗುರುತಿಸಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಮುಂದಾಗಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 18 ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಸುಮಾರು 94.80 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿ ಕರ್ತೋಜಿ ಗ್ರಾಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಇದರಿಂದ ಹರ್ಷಗೊಂಡ ಸ್ಥಳೀಯರು ಕೇಂದ್ರ ಸರ್ಕಾರ ಹಾಗೂ ಯದುವೀರ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…