ಕೊಡಗು

ಮಡಿಕೇರಿಯಲ್ಲಿ ಸಂಸದ ಯದುವೀರ್‌ ಜನ ಸಂಪರ್ಕ ಯಾತ್ರೆ

ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು – ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ‌ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. ಬಲ್ಯಮೊಂಡೂರು ಗ್ರಾಮದ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ನಂತರ ಯದುವೀರ್‌ ಚಿಕ್ಕಮೊಂಡೂರು ದವಸ ಭಂಡಾರಕ್ಕೆ ಭೇಟಿ ನೀಡಿ ಅಲ್ಲಿನ ಸದಸ್ಯರೊಂದಿಗೆ ಸಭೆ ನಡೆಸಿದರು.

ನಂತರ ಬಾಳೆಲೆ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ವಿಕಸಿತ ಭಾರತದ ಕನಸನ್ನು ನನಸು ಮಾಡಲು ಎಲ್ಲರೂ ಪಕ್ಷದಲ್ಲಿ ಜವಾಬ್ದಾರಿಯುತವಾಗಿ ಮುಂದುವರೆಯಬೇಕೆಂದು ಮನವಿ ಮಾಡಿದರು.
ಅಂತಿಮವಾಗಿ ಮಾಯಮುಡಿ ಗ್ರಾಮ ಪಂಚಾಯತಿ ಸಭಾಂಗಣದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಬಲಿಷ್ಟ ಭಾರತದ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಅಹವಾಲುಗಳನ್ನು ಸಲ್ಲಿಸಲು ಸಾರ್ವಜನಿಕರು ಮುಕ್ತವಾಗಿ ಮೈಸೂರು ಕಚೇರಿಗೆ ಭೇಟಿ‌ ನೀಡಬಹುದು, ಸಂಸದರ ಕಚೇರಿ ಜನಸೇವೆಗೆ ಸದಾ ಸಿದ್ದ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

30 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

41 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

55 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

59 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago