ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.
ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. ಬಲ್ಯಮೊಂಡೂರು ಗ್ರಾಮದ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ನಂತರ ಯದುವೀರ್ ಚಿಕ್ಕಮೊಂಡೂರು ದವಸ ಭಂಡಾರಕ್ಕೆ ಭೇಟಿ ನೀಡಿ ಅಲ್ಲಿನ ಸದಸ್ಯರೊಂದಿಗೆ ಸಭೆ ನಡೆಸಿದರು.
ನಂತರ ಬಾಳೆಲೆ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ವಿಕಸಿತ ಭಾರತದ ಕನಸನ್ನು ನನಸು ಮಾಡಲು ಎಲ್ಲರೂ ಪಕ್ಷದಲ್ಲಿ ಜವಾಬ್ದಾರಿಯುತವಾಗಿ ಮುಂದುವರೆಯಬೇಕೆಂದು ಮನವಿ ಮಾಡಿದರು.
ಅಂತಿಮವಾಗಿ ಮಾಯಮುಡಿ ಗ್ರಾಮ ಪಂಚಾಯತಿ ಸಭಾಂಗಣದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಬಲಿಷ್ಟ ಭಾರತದ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಅಹವಾಲುಗಳನ್ನು ಸಲ್ಲಿಸಲು ಸಾರ್ವಜನಿಕರು ಮುಕ್ತವಾಗಿ ಮೈಸೂರು ಕಚೇರಿಗೆ ಭೇಟಿ ನೀಡಬಹುದು, ಸಂಸದರ ಕಚೇರಿ ಜನಸೇವೆಗೆ ಸದಾ ಸಿದ್ದ ಎಂದು ತಿಳಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…