ಕೊಡಗು/ವಿರಾಜಪೇಟೆ: ನಗರ ಬಿಜೆಪಿ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ನಡೆಸಲಾಯಿತು.
ಬೆಳಿಗ್ಗೆ ಪಟ್ಟಣದ ತೆಲುಗರ ಬೀದಿಯ ಮಾರಿಯಮ್ಮ ಗುಡಿಯಿಂದ ವಿರಾಜಪೇಟೆಯ ಗಡಿಯಾರ ಕಂಬದ ಮೂಲಕ ಖಾಸಗಿ ಬಸ್ ನಿಲ್ದಾಣಕ್ಕಾಗಿ ಗೋಣಿಕೊಪ್ಪ ಮುಖ್ಯ ರಸ್ತೆಗಳಲ್ಲಿ ರೋಡ್ ಶೋ ಮತ್ತು ಮತಯಾಚನೆ ನಡೆಸಲಾಯಿತು. ಈ ಸಂದರ್ಭ ಮಹಿಳಾ ತಂಡದಿಂದ ಚಂಡೆ ವಾದ್ಯ ಗಮನಸೆಳೆಯಿತು.
ರೋಡ್ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್, ಚಲನಚಿತ್ರ ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ತಾರಾ, ಕೊಡಗು ಮೈಸೂರು ಕ್ಷೇತ್ರದ ಚುನಾವಣಾ ಉಸ್ತುವಾರಿ ಪಳೆಯಂಡ ರಾಬೀನ್ ದೇವಯ್ಯ, ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಇತರರು ಉಪಸ್ಥಿತರಿದ್ದರು.
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…