ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್ ರಾಯ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ.
ತಿತಿಮತಿ ಗ್ರಾಮದಲ್ಲಿ ವಾಸವಾಗಿದ್ದ ಮನಮೋಹನ್ ರಾಯ್, ತಮ್ಮ ಕಾರನ್ನು ಸರ್ವಿಸ್ ಮಾಡಿಸಲೆಂದು ಪಿರಿಯಾಪಟ್ಟಣಕ್ಕೆ ತೆರಳಿದ್ದರು.
ಬಳಿಕ ವಾಪಸ್ ಬರುವಾಗ ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿದ್ದಾರೆ. ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮನಮೋಹನ್ ರಾಯ್ ಮೃತಪಟ್ಟಿದ್ದಾರೆ.
ಮನಮೋಹನ್ ರಾಯ್ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…