ಕೊಡಗು

ಕೊಡಗಿಗೆ ಉತ್ಸಾಹಿ ಯುವ ಶಾಸಕರ ಬಲ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ ದಸರಾದಲ್ಲಿ ಕಾಫಿಯ ಗಮಲಿಗೆ ಫಿಧಾ ಆದ ಸಚಿವರು

ಮಡಿಕೇರಿ: ಕೊಡುಗು ಜಿಲ್ಲೆಗೆ  ಈ ಬಾರಿ ಇಬ್ಬರು ಉತ್ಸಾಹಿ ಯುವ ಶಾಸಕರ ಬಲ ಸಿಕ್ಕಿದೆ. ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಅತ್ಯಂತ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಪ್ರತಿ ಇಲಾಖೆಯ ಸಚಿವರನ್ನು ನಿರಂತರವಾಗಿ ಬೆನ್ನು ಹತ್ತಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರುತ್ತಿದ್ದಾರೆ. ಪ್ರತಿ ದಿನ ಅವರಿಗೆ ಅಭಿವೃದ್ಧಿಯದ್ದೇ ಜಪ, ಅಭಿವೃದ್ಧಿ ಎಂದರೆ ಕೇವಲ ಕಟ್ಟಡ ರಸ್ತೆ ಮಾತ್ರವಲ್ಲ.ಸಮಗ್ರ ಅಭಿವೃದ್ಧಿಯೇ ಅವರ ಕಾಳಜಿ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಯುವ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾನುವಾರ ಗಾಂಧಿ ಮೈದಾನದಲ್ಲಿ ನಡೆದ ಕಾಫಿ ದಸರಾವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಮಂತರ್ ಗೌಡ ಅವರಂತು ಬೆಳಿಗ್ಗೆಯಿಂದ ರಾತ್ರಿ ವರಗೆ ಕ್ಷೇತ್ರಕ್ಕಾಗಿ ಏನಾದರೂ ಹೊಸತು ತರಲು ತವಕಿಸುತ್ತಲೇ ಇದ್ದಾರೆ. ಇಬ್ಬರೂ ಶಾಸಕರಿಗೆ ಅಭಿನಂದನೆಗಳು, ಈ ಇಬ್ಬರ ಮೇಲೆ ನಿಮ್ಮ ಆಶೀರ್ವಾದ ನಿರಂತರವಾಗಿರಲಿ ಎಂದು ಕೊಡಗು ಜನತೆಗೆ ಹೇಳಿದರು.

ಮಡಿಕೇರಿ ದಸರಾ ಜನೋತ್ಸವ ಎಂಬ ಹಿರಿಮೆಗೆ ಪಾತ್ರವಾಗಿದ್ದು, ಇಂತಹ ದಸರಾದಲ್ಲಿ ಶಾಸಕರಾದ ಮಂತರ್ ಗೌಡ ಅವರ ಪ್ರಯತ್ನದಿಂದ ಈ ಬಾರಿ ಕಾಫಿ ದಸರಾ ಕೂಡ ಸೇರ್ಪಡೆ ಆಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಯತ್ನ ಇಂದ ಕಾಫಿ ಮಾತ್ರವಲ್ಲದೆ ಇತರ ಕೃಷಿಗೆ ಕೂಡ ಸಹಕಾರ ದೊರಕಲಿದೆ ಬೆಳಗಾರರಿಗೆ ಪ್ರೋತ್ಸಾಹ ದೊರಕಲಿದೆ ಎಂದರು.

ಕೊಡಗು ದೇಶದಲ್ಲೇ ವಿಭಿನ್ನ ಜೀವ ಸಂಸ್ಕೃತಿಯ ನೆಲ, ವೀರ ಯೋಧರ ನಾಡು. ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ,ಜನರಲ್ ತಿಮ್ಮಯ್ಯ ಸೇರದಂತೆ ಅನೇಕ ಮಹನೀಯರು ಈ ದೇಶದ ರಕ್ಷಣೆಗೆ ನೀಡಿರುವ ಸೇವೆ ಅನನ್ಯವಾದದ್ದು. ಹಾಗೇ ಹಾಕಿ ಕ್ರೀಡೆಗೂ ಕೊಡಗು ದೊಡ್ಡ ಕೊಡುಗೆ ನೀಡುತ್ತಲೇ ಬಂದಿದೆ. ಜೀವ ನದಿ ಕಾವೇರಿಯ ಉಗಮವೂ ಇದೇ ಪುಣ್ಯ ಭೂಮಿಯಲ್ಲಿ ಅಗಿರುವುದು ನಮಗೆಲ್ಲ ಹೆಮ್ಮೆ ಎಂದು ಕೊಡಗು ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು.

ಕಾಫಿ ಈ ನೆಲೆದ ಬೆಳೆ. ಜಗತ್ತಿನ ಅತೀ ಉತ್ಕೃಷ್ಟ ಕಾಫಿ ಇಲ್ಲಿ ಬೆಳೆಯಲಾಗುತ್ತಿದ್ದು, ರೈತರಿಗೆ ಹಾಗೂ ಕಾಫಿ ಉತ್ತೇಜನಕ್ಕೆ ಪೂರಕವಾಗಿ ಕಾಫಿ ಉತ್ಸವ ಆಯೋಜಿಸಿರುವುದು ಪ್ರಶಂಸನೀಯ. ಹಾಗೇ ಕೃಷಿ ಇಲಾಖೆ ವತಿಯಿಂದಲೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಮಳಿಗೆ ತೆರೆಯಲಾಗಿದೆ ಎಂದರು.

ಭಾರತದಲ್ಲೇ ಅತ್ಯಧಿಕ ಕಾಫಿ ಬೆಳೆ ಬೆಳೆಯುವ ರಾಜ್ಯ ಎಂಬ ಹಿರಿಮೆ ಹೊಂದಿರುವ ಕರ್ನಾಟಕದಲ್ಲಿ ಕೊಡಗು ಕೂಡ ಅತ್ಯಧಿಕ ಕಾಫಿ ಬೆಳೆಯುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಸ್ವಾದಿಷ್ಟ ಕಾಫಿಯನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಕೊಡಗಿನ ಹಿರಿಮೆಗೆ ಇಲ್ಲಿನ ಕಾಫಿ ಕೂಡ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.

ಕಾಫಿ ಬೆಳೆ ಕೇವಲ ಬೆಳೆಗಾರರು ಮಾತ್ರವಲ್ಲದೆ ಸಾವಿರಾರು ಕೃಷಿಕರಿಗೂ ಜೀವನ ನೀಡಿದೆ. ಕೊಡಗಿನ ಬೆಳೆಗಾರರು ತಮ್ಮ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಅತ್ಯುತ್ತಮ ಸೌಲಭ್ಯ ಕಲ್ಪಿಸಿ ಅವರನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಂಡು ಮಾದರಿ ಕೃಷಿಕರಾಗಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

51 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

1 hour ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago