ಕೊಡಗು

ಕೊಡಗಿಗೆ ಉತ್ಸಾಹಿ ಯುವ ಶಾಸಕರ ಬಲ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ ದಸರಾದಲ್ಲಿ ಕಾಫಿಯ ಗಮಲಿಗೆ ಫಿಧಾ ಆದ ಸಚಿವರು

ಮಡಿಕೇರಿ: ಕೊಡುಗು ಜಿಲ್ಲೆಗೆ  ಈ ಬಾರಿ ಇಬ್ಬರು ಉತ್ಸಾಹಿ ಯುವ ಶಾಸಕರ ಬಲ ಸಿಕ್ಕಿದೆ. ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಅತ್ಯಂತ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಪ್ರತಿ ಇಲಾಖೆಯ ಸಚಿವರನ್ನು ನಿರಂತರವಾಗಿ ಬೆನ್ನು ಹತ್ತಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರುತ್ತಿದ್ದಾರೆ. ಪ್ರತಿ ದಿನ ಅವರಿಗೆ ಅಭಿವೃದ್ಧಿಯದ್ದೇ ಜಪ, ಅಭಿವೃದ್ಧಿ ಎಂದರೆ ಕೇವಲ ಕಟ್ಟಡ ರಸ್ತೆ ಮಾತ್ರವಲ್ಲ.ಸಮಗ್ರ ಅಭಿವೃದ್ಧಿಯೇ ಅವರ ಕಾಳಜಿ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಯುವ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾನುವಾರ ಗಾಂಧಿ ಮೈದಾನದಲ್ಲಿ ನಡೆದ ಕಾಫಿ ದಸರಾವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಮಂತರ್ ಗೌಡ ಅವರಂತು ಬೆಳಿಗ್ಗೆಯಿಂದ ರಾತ್ರಿ ವರಗೆ ಕ್ಷೇತ್ರಕ್ಕಾಗಿ ಏನಾದರೂ ಹೊಸತು ತರಲು ತವಕಿಸುತ್ತಲೇ ಇದ್ದಾರೆ. ಇಬ್ಬರೂ ಶಾಸಕರಿಗೆ ಅಭಿನಂದನೆಗಳು, ಈ ಇಬ್ಬರ ಮೇಲೆ ನಿಮ್ಮ ಆಶೀರ್ವಾದ ನಿರಂತರವಾಗಿರಲಿ ಎಂದು ಕೊಡಗು ಜನತೆಗೆ ಹೇಳಿದರು.

ಮಡಿಕೇರಿ ದಸರಾ ಜನೋತ್ಸವ ಎಂಬ ಹಿರಿಮೆಗೆ ಪಾತ್ರವಾಗಿದ್ದು, ಇಂತಹ ದಸರಾದಲ್ಲಿ ಶಾಸಕರಾದ ಮಂತರ್ ಗೌಡ ಅವರ ಪ್ರಯತ್ನದಿಂದ ಈ ಬಾರಿ ಕಾಫಿ ದಸರಾ ಕೂಡ ಸೇರ್ಪಡೆ ಆಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಯತ್ನ ಇಂದ ಕಾಫಿ ಮಾತ್ರವಲ್ಲದೆ ಇತರ ಕೃಷಿಗೆ ಕೂಡ ಸಹಕಾರ ದೊರಕಲಿದೆ ಬೆಳಗಾರರಿಗೆ ಪ್ರೋತ್ಸಾಹ ದೊರಕಲಿದೆ ಎಂದರು.

ಕೊಡಗು ದೇಶದಲ್ಲೇ ವಿಭಿನ್ನ ಜೀವ ಸಂಸ್ಕೃತಿಯ ನೆಲ, ವೀರ ಯೋಧರ ನಾಡು. ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ,ಜನರಲ್ ತಿಮ್ಮಯ್ಯ ಸೇರದಂತೆ ಅನೇಕ ಮಹನೀಯರು ಈ ದೇಶದ ರಕ್ಷಣೆಗೆ ನೀಡಿರುವ ಸೇವೆ ಅನನ್ಯವಾದದ್ದು. ಹಾಗೇ ಹಾಕಿ ಕ್ರೀಡೆಗೂ ಕೊಡಗು ದೊಡ್ಡ ಕೊಡುಗೆ ನೀಡುತ್ತಲೇ ಬಂದಿದೆ. ಜೀವ ನದಿ ಕಾವೇರಿಯ ಉಗಮವೂ ಇದೇ ಪುಣ್ಯ ಭೂಮಿಯಲ್ಲಿ ಅಗಿರುವುದು ನಮಗೆಲ್ಲ ಹೆಮ್ಮೆ ಎಂದು ಕೊಡಗು ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು.

ಕಾಫಿ ಈ ನೆಲೆದ ಬೆಳೆ. ಜಗತ್ತಿನ ಅತೀ ಉತ್ಕೃಷ್ಟ ಕಾಫಿ ಇಲ್ಲಿ ಬೆಳೆಯಲಾಗುತ್ತಿದ್ದು, ರೈತರಿಗೆ ಹಾಗೂ ಕಾಫಿ ಉತ್ತೇಜನಕ್ಕೆ ಪೂರಕವಾಗಿ ಕಾಫಿ ಉತ್ಸವ ಆಯೋಜಿಸಿರುವುದು ಪ್ರಶಂಸನೀಯ. ಹಾಗೇ ಕೃಷಿ ಇಲಾಖೆ ವತಿಯಿಂದಲೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಮಳಿಗೆ ತೆರೆಯಲಾಗಿದೆ ಎಂದರು.

ಭಾರತದಲ್ಲೇ ಅತ್ಯಧಿಕ ಕಾಫಿ ಬೆಳೆ ಬೆಳೆಯುವ ರಾಜ್ಯ ಎಂಬ ಹಿರಿಮೆ ಹೊಂದಿರುವ ಕರ್ನಾಟಕದಲ್ಲಿ ಕೊಡಗು ಕೂಡ ಅತ್ಯಧಿಕ ಕಾಫಿ ಬೆಳೆಯುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಸ್ವಾದಿಷ್ಟ ಕಾಫಿಯನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಕೊಡಗಿನ ಹಿರಿಮೆಗೆ ಇಲ್ಲಿನ ಕಾಫಿ ಕೂಡ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.

ಕಾಫಿ ಬೆಳೆ ಕೇವಲ ಬೆಳೆಗಾರರು ಮಾತ್ರವಲ್ಲದೆ ಸಾವಿರಾರು ಕೃಷಿಕರಿಗೂ ಜೀವನ ನೀಡಿದೆ. ಕೊಡಗಿನ ಬೆಳೆಗಾರರು ತಮ್ಮ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಅತ್ಯುತ್ತಮ ಸೌಲಭ್ಯ ಕಲ್ಪಿಸಿ ಅವರನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಂಡು ಮಾದರಿ ಕೃಷಿಕರಾಗಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

36 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

56 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

59 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

1 hour ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago