ಕೊಡಗು

ಕೊಡಗಿಗೆ ಉತ್ಸಾಹಿ ಯುವ ಶಾಸಕರ ಬಲ: ಸಚಿವ ಚಲುವರಾಯಸ್ವಾಮಿ

ಮಡಿಕೇರಿ ದಸರಾದಲ್ಲಿ ಕಾಫಿಯ ಗಮಲಿಗೆ ಫಿಧಾ ಆದ ಸಚಿವರು

ಮಡಿಕೇರಿ: ಕೊಡುಗು ಜಿಲ್ಲೆಗೆ  ಈ ಬಾರಿ ಇಬ್ಬರು ಉತ್ಸಾಹಿ ಯುವ ಶಾಸಕರ ಬಲ ಸಿಕ್ಕಿದೆ. ಶಾಸಕರಾದ ಪೊನ್ನಣ್ಣ ಹಾಗೂ ಮಂತರ್ ಗೌಡ ಅತ್ಯಂತ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದು, ಪ್ರತಿ ಇಲಾಖೆಯ ಸಚಿವರನ್ನು ನಿರಂತರವಾಗಿ ಬೆನ್ನು ಹತ್ತಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರುತ್ತಿದ್ದಾರೆ. ಪ್ರತಿ ದಿನ ಅವರಿಗೆ ಅಭಿವೃದ್ಧಿಯದ್ದೇ ಜಪ, ಅಭಿವೃದ್ಧಿ ಎಂದರೆ ಕೇವಲ ಕಟ್ಟಡ ರಸ್ತೆ ಮಾತ್ರವಲ್ಲ.ಸಮಗ್ರ ಅಭಿವೃದ್ಧಿಯೇ ಅವರ ಕಾಳಜಿ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಯುವ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾನುವಾರ ಗಾಂಧಿ ಮೈದಾನದಲ್ಲಿ ನಡೆದ ಕಾಫಿ ದಸರಾವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಮಂತರ್ ಗೌಡ ಅವರಂತು ಬೆಳಿಗ್ಗೆಯಿಂದ ರಾತ್ರಿ ವರಗೆ ಕ್ಷೇತ್ರಕ್ಕಾಗಿ ಏನಾದರೂ ಹೊಸತು ತರಲು ತವಕಿಸುತ್ತಲೇ ಇದ್ದಾರೆ. ಇಬ್ಬರೂ ಶಾಸಕರಿಗೆ ಅಭಿನಂದನೆಗಳು, ಈ ಇಬ್ಬರ ಮೇಲೆ ನಿಮ್ಮ ಆಶೀರ್ವಾದ ನಿರಂತರವಾಗಿರಲಿ ಎಂದು ಕೊಡಗು ಜನತೆಗೆ ಹೇಳಿದರು.

ಮಡಿಕೇರಿ ದಸರಾ ಜನೋತ್ಸವ ಎಂಬ ಹಿರಿಮೆಗೆ ಪಾತ್ರವಾಗಿದ್ದು, ಇಂತಹ ದಸರಾದಲ್ಲಿ ಶಾಸಕರಾದ ಮಂತರ್ ಗೌಡ ಅವರ ಪ್ರಯತ್ನದಿಂದ ಈ ಬಾರಿ ಕಾಫಿ ದಸರಾ ಕೂಡ ಸೇರ್ಪಡೆ ಆಗುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಯತ್ನ ಇಂದ ಕಾಫಿ ಮಾತ್ರವಲ್ಲದೆ ಇತರ ಕೃಷಿಗೆ ಕೂಡ ಸಹಕಾರ ದೊರಕಲಿದೆ ಬೆಳಗಾರರಿಗೆ ಪ್ರೋತ್ಸಾಹ ದೊರಕಲಿದೆ ಎಂದರು.

ಕೊಡಗು ದೇಶದಲ್ಲೇ ವಿಭಿನ್ನ ಜೀವ ಸಂಸ್ಕೃತಿಯ ನೆಲ, ವೀರ ಯೋಧರ ನಾಡು. ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ,ಜನರಲ್ ತಿಮ್ಮಯ್ಯ ಸೇರದಂತೆ ಅನೇಕ ಮಹನೀಯರು ಈ ದೇಶದ ರಕ್ಷಣೆಗೆ ನೀಡಿರುವ ಸೇವೆ ಅನನ್ಯವಾದದ್ದು. ಹಾಗೇ ಹಾಕಿ ಕ್ರೀಡೆಗೂ ಕೊಡಗು ದೊಡ್ಡ ಕೊಡುಗೆ ನೀಡುತ್ತಲೇ ಬಂದಿದೆ. ಜೀವ ನದಿ ಕಾವೇರಿಯ ಉಗಮವೂ ಇದೇ ಪುಣ್ಯ ಭೂಮಿಯಲ್ಲಿ ಅಗಿರುವುದು ನಮಗೆಲ್ಲ ಹೆಮ್ಮೆ ಎಂದು ಕೊಡಗು ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು.

ಕಾಫಿ ಈ ನೆಲೆದ ಬೆಳೆ. ಜಗತ್ತಿನ ಅತೀ ಉತ್ಕೃಷ್ಟ ಕಾಫಿ ಇಲ್ಲಿ ಬೆಳೆಯಲಾಗುತ್ತಿದ್ದು, ರೈತರಿಗೆ ಹಾಗೂ ಕಾಫಿ ಉತ್ತೇಜನಕ್ಕೆ ಪೂರಕವಾಗಿ ಕಾಫಿ ಉತ್ಸವ ಆಯೋಜಿಸಿರುವುದು ಪ್ರಶಂಸನೀಯ. ಹಾಗೇ ಕೃಷಿ ಇಲಾಖೆ ವತಿಯಿಂದಲೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಮಳಿಗೆ ತೆರೆಯಲಾಗಿದೆ ಎಂದರು.

ಭಾರತದಲ್ಲೇ ಅತ್ಯಧಿಕ ಕಾಫಿ ಬೆಳೆ ಬೆಳೆಯುವ ರಾಜ್ಯ ಎಂಬ ಹಿರಿಮೆ ಹೊಂದಿರುವ ಕರ್ನಾಟಕದಲ್ಲಿ ಕೊಡಗು ಕೂಡ ಅತ್ಯಧಿಕ ಕಾಫಿ ಬೆಳೆಯುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಸ್ವಾದಿಷ್ಟ ಕಾಫಿಯನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಕೊಡಗಿನ ಹಿರಿಮೆಗೆ ಇಲ್ಲಿನ ಕಾಫಿ ಕೂಡ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.

ಕಾಫಿ ಬೆಳೆ ಕೇವಲ ಬೆಳೆಗಾರರು ಮಾತ್ರವಲ್ಲದೆ ಸಾವಿರಾರು ಕೃಷಿಕರಿಗೂ ಜೀವನ ನೀಡಿದೆ. ಕೊಡಗಿನ ಬೆಳೆಗಾರರು ತಮ್ಮ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಅತ್ಯುತ್ತಮ ಸೌಲಭ್ಯ ಕಲ್ಪಿಸಿ ಅವರನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಂಡು ಮಾದರಿ ಕೃಷಿಕರಾಗಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago