ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ.
ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ(27) ಮೃತ ದುರ್ದೈವಿ.
ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೆನಲ್ಲಿ ತಂಗಿದ್ದಳು.
ಇಂದು ಬೆಳಿಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ.
ಬಾತ್ ರೂಮಿನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…