ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.
ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.
ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…