ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.
ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.
ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…