ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.
ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.
ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…