ಕೊಡಗು

ಮೆಡಿಕಲ್ ಕಾಲೇಜು ಆವರಣದಲ್ಲಿ ಯುವಕರ ಪುಂಡಾಟ: ಸೂಕ್ತ ಭದ್ರತೆ ಒದಗಿಸಲು ವಿದ್ಯಾರ್ಥಿಗಳ ಒತ್ತಾಯ

ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ  ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.

ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.

ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.

ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago