ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.
ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.
ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…