ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೊಡಗಿನ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆದಿದ್ದು, ಭಕ್ತರು ಹೊಸ ಬಟ್ಟೆ ಧರಿಸಿ ಕುಟುಂಬ ಸಮೇತರಾಗಿ ದೇವಾಲಯಗಳತ್ತ ಆಗಮಿಸಿದರು.
ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳು ಜರುಗಿದ್ದು, ಆಗಮಿಸಿದ ಭಕ್ತಾಧಿಗಳಿಗೆ ಅರ್ಚಕರು ತೀರ್ಥ ಪ್ರಸಾದದ ಜೊತೆ ಬೇವು ಬೆಲ್ಲ ಕೂಡ ವಿತರಿಸಿದರು. ದೇವಾಲಯಕ್ಕೆ ಆಗಮಿಸಿದ ಭಕ್ತರು ಕೂಡ ಸರತಿ ಸಾಲಿನಲ್ಲಿ ನಿಂತು ಬೇವು ಬೆಲ್ಲ ಸವಿದು ಪುನೀತರಾದರು.




