ಜಿಲ್ಲೆಗಳು

ಬೆಳೆ ನಷ್ಟಕ್ಕೆ ಕಾರಣವಾಗಿದ್ದ ಕಂಪೆನಿಗೆ 2.11 ಲಕ್ಷ ರೂ. ದಂಡ

ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ.

ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು ೨.೭.೨೦೨೧ರಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆಗೆ ಅಡಷಾಪ್ ಪ್ರಮೋಷನ್ ರಾಜ್ ಕೋಟ್ ಕಂಪನಿ ತಯಾರಿಸಿದ್ದ ಆಯುರ್ವೇದ ಔಷಧಿಯನ್ನು ಹೆಚ್ಚು ಇಳುವರಿ ಬರಲಿ ಎಂಬ ಉದ್ದೇಶದಿಂದ ಸಿಂಪಡಿಸಿದ್ದರು. ಆದರೆ ಔಷಧಿ ಸಿಂಪಡಿಸಿದ್ದ ಕೆಲವೇ ತಿಂಗಳಲ್ಲಿ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು. ಇದ್ದರಿಂದ ಒಟ್ಟು ೨ ಲಕ್ಷ ರೂ. ನಷ್ಟವಾಗಿದ್ದು, ಪರಿಹಾರ ಕೊಡಿಸಬೇಕೆಂದು ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ವೇದಿಕೆಯ ಪೀಠಾಧ್ಯಕ್ಷರಾದ ನ್ಯಾಯಾಧೀಶರಾದ ನವೀನ್ ಕುವಾರಿ, ಪೀಠ ಸದಸ್ಯರಾದ ಶ್ರೀನಿಧಿ, ಭಾರತಿ ಅವರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ರೈತರಿಗೆ ೨.೧೧ ಲಕ್ಷ ರೂ. ಪರಿಹಾರ ನೀಡುವಂತೆ ನ.೩ರಂದು ಆದೇಶ ನೀಡಿದ್ದಾರೆ. ಒಂದು ತಿಂಗಳ ಒಳಗೆ ಪರಿಹಾರ ನೀಡದಿದ್ದರೆ ಶೇ.೧೮ ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಸೂಚಿಸಿದ್ದಾರೆ.

ರೈತರ ಪರ ಹಿರಿಯ ವಕೀಲ ತೀರ್ಥಪ್ರಸಾದ್ ವಾದ ಮಂಡಿಸಿದರು. ಔಷಧಿ ಕಂಪನಿ ಪರ ವಕೀಲ ವೀರಭದ್ರಸ್ವಾಮಿ ವಕಾಲತ್ತು ವಹಿಸಿದ್ದರು.

andolanait

Recent Posts

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

37 mins ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 hour ago

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…

1 hour ago

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

1 hour ago

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…

2 hours ago

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…

2 hours ago