ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ.
ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು ೨.೭.೨೦೨೧ರಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆಗೆ ಅಡಷಾಪ್ ಪ್ರಮೋಷನ್ ರಾಜ್ ಕೋಟ್ ಕಂಪನಿ ತಯಾರಿಸಿದ್ದ ಆಯುರ್ವೇದ ಔಷಧಿಯನ್ನು ಹೆಚ್ಚು ಇಳುವರಿ ಬರಲಿ ಎಂಬ ಉದ್ದೇಶದಿಂದ ಸಿಂಪಡಿಸಿದ್ದರು. ಆದರೆ ಔಷಧಿ ಸಿಂಪಡಿಸಿದ್ದ ಕೆಲವೇ ತಿಂಗಳಲ್ಲಿ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು. ಇದ್ದರಿಂದ ಒಟ್ಟು ೨ ಲಕ್ಷ ರೂ. ನಷ್ಟವಾಗಿದ್ದು, ಪರಿಹಾರ ಕೊಡಿಸಬೇಕೆಂದು ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ವೇದಿಕೆಯ ಪೀಠಾಧ್ಯಕ್ಷರಾದ ನ್ಯಾಯಾಧೀಶರಾದ ನವೀನ್ ಕುವಾರಿ, ಪೀಠ ಸದಸ್ಯರಾದ ಶ್ರೀನಿಧಿ, ಭಾರತಿ ಅವರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ರೈತರಿಗೆ ೨.೧೧ ಲಕ್ಷ ರೂ. ಪರಿಹಾರ ನೀಡುವಂತೆ ನ.೩ರಂದು ಆದೇಶ ನೀಡಿದ್ದಾರೆ. ಒಂದು ತಿಂಗಳ ಒಳಗೆ ಪರಿಹಾರ ನೀಡದಿದ್ದರೆ ಶೇ.೧೮ ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಸೂಚಿಸಿದ್ದಾರೆ.
ರೈತರ ಪರ ಹಿರಿಯ ವಕೀಲ ತೀರ್ಥಪ್ರಸಾದ್ ವಾದ ಮಂಡಿಸಿದರು. ಔಷಧಿ ಕಂಪನಿ ಪರ ವಕೀಲ ವೀರಭದ್ರಸ್ವಾಮಿ ವಕಾಲತ್ತು ವಹಿಸಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…