ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ.
ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು ೨.೭.೨೦೨೧ರಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆಗೆ ಅಡಷಾಪ್ ಪ್ರಮೋಷನ್ ರಾಜ್ ಕೋಟ್ ಕಂಪನಿ ತಯಾರಿಸಿದ್ದ ಆಯುರ್ವೇದ ಔಷಧಿಯನ್ನು ಹೆಚ್ಚು ಇಳುವರಿ ಬರಲಿ ಎಂಬ ಉದ್ದೇಶದಿಂದ ಸಿಂಪಡಿಸಿದ್ದರು. ಆದರೆ ಔಷಧಿ ಸಿಂಪಡಿಸಿದ್ದ ಕೆಲವೇ ತಿಂಗಳಲ್ಲಿ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು. ಇದ್ದರಿಂದ ಒಟ್ಟು ೨ ಲಕ್ಷ ರೂ. ನಷ್ಟವಾಗಿದ್ದು, ಪರಿಹಾರ ಕೊಡಿಸಬೇಕೆಂದು ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ವೇದಿಕೆಯ ಪೀಠಾಧ್ಯಕ್ಷರಾದ ನ್ಯಾಯಾಧೀಶರಾದ ನವೀನ್ ಕುವಾರಿ, ಪೀಠ ಸದಸ್ಯರಾದ ಶ್ರೀನಿಧಿ, ಭಾರತಿ ಅವರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ರೈತರಿಗೆ ೨.೧೧ ಲಕ್ಷ ರೂ. ಪರಿಹಾರ ನೀಡುವಂತೆ ನ.೩ರಂದು ಆದೇಶ ನೀಡಿದ್ದಾರೆ. ಒಂದು ತಿಂಗಳ ಒಳಗೆ ಪರಿಹಾರ ನೀಡದಿದ್ದರೆ ಶೇ.೧೮ ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಸೂಚಿಸಿದ್ದಾರೆ.
ರೈತರ ಪರ ಹಿರಿಯ ವಕೀಲ ತೀರ್ಥಪ್ರಸಾದ್ ವಾದ ಮಂಡಿಸಿದರು. ಔಷಧಿ ಕಂಪನಿ ಪರ ವಕೀಲ ವೀರಭದ್ರಸ್ವಾಮಿ ವಕಾಲತ್ತು ವಹಿಸಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…