ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ.
ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು ೨.೭.೨೦೨೧ರಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆಗೆ ಅಡಷಾಪ್ ಪ್ರಮೋಷನ್ ರಾಜ್ ಕೋಟ್ ಕಂಪನಿ ತಯಾರಿಸಿದ್ದ ಆಯುರ್ವೇದ ಔಷಧಿಯನ್ನು ಹೆಚ್ಚು ಇಳುವರಿ ಬರಲಿ ಎಂಬ ಉದ್ದೇಶದಿಂದ ಸಿಂಪಡಿಸಿದ್ದರು. ಆದರೆ ಔಷಧಿ ಸಿಂಪಡಿಸಿದ್ದ ಕೆಲವೇ ತಿಂಗಳಲ್ಲಿ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು. ಇದ್ದರಿಂದ ಒಟ್ಟು ೨ ಲಕ್ಷ ರೂ. ನಷ್ಟವಾಗಿದ್ದು, ಪರಿಹಾರ ಕೊಡಿಸಬೇಕೆಂದು ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ವೇದಿಕೆಯ ಪೀಠಾಧ್ಯಕ್ಷರಾದ ನ್ಯಾಯಾಧೀಶರಾದ ನವೀನ್ ಕುವಾರಿ, ಪೀಠ ಸದಸ್ಯರಾದ ಶ್ರೀನಿಧಿ, ಭಾರತಿ ಅವರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ರೈತರಿಗೆ ೨.೧೧ ಲಕ್ಷ ರೂ. ಪರಿಹಾರ ನೀಡುವಂತೆ ನ.೩ರಂದು ಆದೇಶ ನೀಡಿದ್ದಾರೆ. ಒಂದು ತಿಂಗಳ ಒಳಗೆ ಪರಿಹಾರ ನೀಡದಿದ್ದರೆ ಶೇ.೧೮ ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಸೂಚಿಸಿದ್ದಾರೆ.
ರೈತರ ಪರ ಹಿರಿಯ ವಕೀಲ ತೀರ್ಥಪ್ರಸಾದ್ ವಾದ ಮಂಡಿಸಿದರು. ಔಷಧಿ ಕಂಪನಿ ಪರ ವಕೀಲ ವೀರಭದ್ರಸ್ವಾಮಿ ವಕಾಲತ್ತು ವಹಿಸಿದ್ದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…