ಜಿಲ್ಲೆಗಳು

ಬೆಳೆ ನಷ್ಟಕ್ಕೆ ಕಾರಣವಾಗಿದ್ದ ಕಂಪೆನಿಗೆ 2.11 ಲಕ್ಷ ರೂ. ದಂಡ

ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ.

ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು ೨.೭.೨೦೨೧ರಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆಗೆ ಅಡಷಾಪ್ ಪ್ರಮೋಷನ್ ರಾಜ್ ಕೋಟ್ ಕಂಪನಿ ತಯಾರಿಸಿದ್ದ ಆಯುರ್ವೇದ ಔಷಧಿಯನ್ನು ಹೆಚ್ಚು ಇಳುವರಿ ಬರಲಿ ಎಂಬ ಉದ್ದೇಶದಿಂದ ಸಿಂಪಡಿಸಿದ್ದರು. ಆದರೆ ಔಷಧಿ ಸಿಂಪಡಿಸಿದ್ದ ಕೆಲವೇ ತಿಂಗಳಲ್ಲಿ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು. ಇದ್ದರಿಂದ ಒಟ್ಟು ೨ ಲಕ್ಷ ರೂ. ನಷ್ಟವಾಗಿದ್ದು, ಪರಿಹಾರ ಕೊಡಿಸಬೇಕೆಂದು ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ವೇದಿಕೆಯ ಪೀಠಾಧ್ಯಕ್ಷರಾದ ನ್ಯಾಯಾಧೀಶರಾದ ನವೀನ್ ಕುವಾರಿ, ಪೀಠ ಸದಸ್ಯರಾದ ಶ್ರೀನಿಧಿ, ಭಾರತಿ ಅವರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ರೈತರಿಗೆ ೨.೧೧ ಲಕ್ಷ ರೂ. ಪರಿಹಾರ ನೀಡುವಂತೆ ನ.೩ರಂದು ಆದೇಶ ನೀಡಿದ್ದಾರೆ. ಒಂದು ತಿಂಗಳ ಒಳಗೆ ಪರಿಹಾರ ನೀಡದಿದ್ದರೆ ಶೇ.೧೮ ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಸೂಚಿಸಿದ್ದಾರೆ.

ರೈತರ ಪರ ಹಿರಿಯ ವಕೀಲ ತೀರ್ಥಪ್ರಸಾದ್ ವಾದ ಮಂಡಿಸಿದರು. ಔಷಧಿ ಕಂಪನಿ ಪರ ವಕೀಲ ವೀರಭದ್ರಸ್ವಾಮಿ ವಕಾಲತ್ತು ವಹಿಸಿದ್ದರು.

andolanait

Recent Posts

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

1 hour ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

8 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

13 hours ago